
Karnataka Panchayat Raj Commissionerate Recruitment 2026 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿಷಯ ಪರಿಣಿತರು ಮತ್ತು ಯುವ ವೃತ್ತಿಪರರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Panchayat Raj Commissionerate Recruitment 2026 : Details of Vacancies
ಹುದ್ದೆ :
ವಿಷಯ ಪರಿಣಿತರು, ಯುವ ವೃತ್ತಿಪರರು.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ವಿಷಯ ಪರಿಣಿತರು | 1 |
| ಯುವ ವೃತ್ತಿಪರರು | 2 |
ಶೈಕ್ಷಣಿಕ ಅರ್ಹತೆ :
ವಿಷಯ ಪರಿಣಿತರು –
ಸಮಾಜ ಶಾಸ್ತ್ರ/ ಸಮಾಜ ಕಾರ್ಯ/ ಗ್ರಾಮೀಣಾಭಿವೃದ್ಧಿ/ ಸಾರ್ವಜನಿಕ ನೀತಿ ಅಥವಾ ಇತರೆ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.
ಯುವ ವೃತ್ತಿಪರರು –
ಸಮಾಜ ಶಾಸ್ತ್ರ/ ಸಮಾಜ ಕಾರ್ಯ/ ಗ್ರಾಮೀಣಾಭಿವೃದ್ಧಿ/ ಸಾರ್ವಜನಿಕ ನೀತಿ ವಿಷಯ ಅಥವಾ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ 2026
ವಯೋಮಿತಿ :
• ವಿಷಯ ಪರಿಣಿತರು – ಕನಿಷ್ಠ 30 ವರ್ಷ
• ಯುವ ವೃತ್ತಿಪರರು – ಗರಿಷ್ಠ 35 ವರ್ಷ
ವೇತನ :
| ಹುದ್ದೆ | ವೇತನ |
| ವಿಷಯ ಪರಿಣಿತರು | ರೂ. 1,00,000/- |
| ಯುವ ವೃತ್ತಿಪರರು | ರೂ. 75,000/- |
ಅನುಭವ :
ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ :
ವಿದ್ಯಾರ್ಹತೆ, ಅನುಭವ ಮತ್ತು ಕೌಶಲ್ಯವನ್ನು ಆಧರಿಸಿ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ಮೂಲಕ ನೇಮಕಾತಿ ಮಾಡಲಾಗುವುದು.
ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಅಥವಾ ಇಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ನಿಗದಿಪಡಿಸಲಾದ ಅರ್ಹತೆಗಳು ಮತ್ತು ಅನುಭವಗಳಿಗೆ ಅನುಗುಣವಾಗಿ ಸ್ವ-ವಿವರಗಳನ್ನು ಒಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಖುದ್ದಾಗಿ ಹಾಜರಾಗಿ ಈ ಕೆಳಗಡೆ ನಿಡಲಾದ ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು ಅಥವಾ ಈ ಕೆಳಗಡೆ ನೀಡಲಾಗಿರುವ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಪಂಚಾಯತ್ ರಾಜ್ ಆಯುಕ್ತಾಲಯ, ಕಾಳಿದಾಸ ರಸ್ತೆ, ಗಾಂಧಿನಗರ, ಬೆಂಗಳೂರು
ಇಮೇಲ್ ವಿಳಾಸ :
srlgrecruitment@gmail.com
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 30, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 06, 2026
Karnataka Panchayat Raj Commissionerate Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.