KSAT Recruitment 2022 – Apply for 07 Dalayath Posts

KSAT Recruitment 2022 : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSAT Recruitment 2022 : Details of Vacancies

ಹುದ್ದೆ : ದಲಾಯತ್ (ಗ್ರೂಪ್ ಡಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ದಿಂದ ರೂ. 28,950ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸಂದರ್ಶನವು ಗರಿಷ್ಠ 30 ಅಂಕಗಳನ್ನು ಒಳಗೊಂಡಿರುತ್ತದೆ.

ಉದ್ಯೋಗ ಮಾಹಿತಿ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ನೇಮಕಾತಿ 2022

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಚೇರಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು – 560009

ನಿಗದಿತ ಅರ್ಜಿ ಶುಲ್ಕದ ವಿವರ : ಪ.ಜಾತಿ, ಪ.ಪಂ., ಪ್ರ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಅಭ್ಯರ್ಥಿಗಳು ರೂ. 150 ಗಳನ್ನು ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು – 560009” ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 09, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 25, 2022

KSAT Recruitment 2022 : Important Links

ಅಧಿಸೂಚನೆClick Here
ಅರ್ಜಿ ನಮೂನೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment