KSSFCL Recruitment 2021 – 32 ಸಹಾಯಕ ಹಾಗೂ ವಿವಿಧ ಹುದ್ದೆಗಳ ಭರ್ತಿ

KSSFCL Recruitment 2021 – ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSSFCL Recruitment 2021 : Details of Vacancies

ಹುದ್ದೆ : ಸಿವಿಲ್ ಇಂಜಿನಿಯರ್ (ವ್ಯವಸ್ಥಾಪಕ ಶ್ರೇಣಿ), ಸಹಾಯಕರು, ಉಪ ಸಿಬ್ಬಂದಿ ಕಮ್ ವಾಹನ ಚಾಲಕ, ಉಪ ಸಿಬ್ಬಂದಿ (ಪ್ಯೂನ್/ಅಟೆಂಡರ್), ಸ್ವೀಪರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಸಿವಿಲ್ ಇಂಜಿನಿಯರ್0230,000/-
ಸಹಾಯಕರು1618,000/-
ಉಪ ಸಿಬ್ಬಂದಿ ಕಮ್ ವಾಹನ ಚಾಲಕ0616,000/-
ಉಪ ಸಿಬ್ಬಂದಿ (ಪ್ಯೂನ್/ಅಟೆಂಡರ್)0614,000/-
ಸ್ವೀಪರ್0212,000/-

ಶೈಕ್ಷಣಿಕ ಅರ್ಹತೆ :
ಸಿವಿಲ್ ಇಂಜಿನಿಯರ್ (ವ್ಯವಸ್ಥಾಪಕ ಶ್ರೇಣಿ) ಹುದ್ದೆಗೆ ಸಿವಿಲ್ ಇಂಜಿನಿಯರ್ ವಿಷಯದಲ್ಲಿ ಪದವಿ ಜೊತೆಗೆ ಕನಿಷ್ಠ ಎರಡು ವರ್ಷ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಸಹಾಯಕರು ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಅಥವಾ ಸಹಕಾರ ವಿಷಯದಲ್ಲಿ ಪದವಿ ಅರ್ಹತೆ ಹೊಂದಿರಬೇಕು.
ಉಪ ಸಿಬ್ಬಂದಿ ಕಮ್ ವಾಹನ ಚಾಲಕ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಕ್ಷಮ ಪ್ರಾಧಿಕಾರದಿಂದ ಮೋಟಾರ್ ವಾಹನ ಚಾಲನಾ ಪರವಾನಿಗೆ ಪಡೆದಿರಬೇಕು. ಲಘುವಾಹನ ಚಾಲಕರಾಗಿ ಎರಡು ವರ್ಷ ಅನುಭವ ಹೊಂದಿದವರಿಗೆ ಆದ್ಯತೆ.
• ಉಪ ಸಿಬ್ಬಂದಿ (ಪ್ಯೂನ್/ಅಟೆಂಡರ್)
ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಸ್ವೀಪರ್ ಹುದ್ದೆಗೆ 7ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಸಹಾಯಕ ಹುದ್ದೆಗೆ ಗರಿಷ್ಠ 36 ವರ್ಷ, ಉಪಸಿಬ್ಬಂದಿ ಕಂ ವಾಹನ ಚಾಲಕ ಹುದ್ದೆಗೆ ಗರಿಷ್ಠ 32 ವರ್ಷ, ಉಪಸಿಬ್ಬಂದಿ ಹುದ್ದೆಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯ್ತಿಯಲ್ಲಿ 295 ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೆಬ್‌ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಅಗತ್ಯ ದಾಖಲಾತಿಗಳೊಂದಿಗೆ ಸಂಯುಕ್ತ ಸಹಕಾರಿಯ ಕೇಂದ್ರ ಕಛೇರಿಗೆ ತಲುಪುವಂತೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.,
ನಿರ್ಮಾಣ ಭವನ, ಡಾ. ರಾಜಕುಮಾರ ರಸ್ತೆ, 1ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು – 560010

ಅರ್ಜಿ ಶುಲ್ಕ : ಸಿವಿಲ್ ಇಂಜಿನಿಯರ್, ಸಹಾಯಕ ಹುದ್ದೆಗೆ ರೂ. 1,000 ಹಾಗೂ ಉಳಿದ ಹುದ್ದೆಗಳಿಗೆ ರೂ. 500 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ‘ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.’ ಈ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಂದಾಯವಾಗುವಂತೆ ಡಿ.ಡಿ ತೆಗೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 20, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2021

KSSFCL Recruitment 2021 : Important Links

ಅಧಿಸೂಚನೆ : Click Here
ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.